ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ
Oct. 17, 2025, 1:39 p.m.ನೆರೆ ರಾಜ್ಯ ತಮಿಳುನಾಡಿನಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್ ಮನೆ ಬಳಿಕ ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ಹುಸಿಬಾಂಬ್ ಬೆದರಿಕೆ ಹಾಕಲಾಗಿದೆ. ವಾರದ ಹಿಂದೆ ಇಂತಹುದೆ ಪ್ರಕರಣ ತಮಿಳುನಾಡಿನ ಮದುರವೋಯಲ್ನಲ್ಲಿ ವರದಿಯಾಗಿತ್ತು. ಪಾರ್ಕ್ ಮತ್ತು ದೇಗುಲದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.








